ವಿಂಗ್ ಕಮಾಂಡರ್ ಅಭಿನಂದನ್ ಪಾಕ್ ಸೈನಿಕರ ವಶಕ್ಕೆ ಸಿಲುಕಿದ್ದೇಗೆ,? ಇಲ್ಲಿದೆ ಮಾಹಿತಿ!
ಜೈ ಶೇಗುಣಸಿ ಸುದ್ದಿ.: ಪಾಕಿಸ್ತಾನದ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ಸಾಗಲಿ ಎಂದು ಇಡೀ ದೇಶವೇ ಪ್ರಾರ್ಥಿಸುತ್ತಿದೆ. ಈ ಮಧ್ಯೆ ಅಭಿನಂದನ್ ಅವರು ಪಾಕಿಸ್ತಾನ ಸೈನಿಕರ ವಶಕ್ಕೆ ಸಿಲುಕ್ಕಿದ್ದು ಹೇಗೆ ಎಂಬ ವಿವರ ಇಲ್ಲಿದೆ. ಫೆ.14ರ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆಯ ಯುದ್ಧ ವಿಮಾನಗಳು ಫೆಬ್ರವರಿ 26ರಂದು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳನ್ನು ಧ್ವಂಸ ಮಾಡಿ ಯಶಸ್ವಿಯಾಗಿ ಹಿಂದಿರುಗಿದ್ದವು. ಇದಕ್ಕೆ ಪ್ರತಿಯಾಗಿ ಫೆಬ್ರವರಿ 27ರಂದು ಬೆಳಗ್ಗೆ ಪಾಕಿಸ್ತಾನದ ಮೂರು ಎಫ್-16 ಯುದ್ಧ ವಿಮಾನಗಳು ವಾಯುಸೀಮೆಯನ್ನು ದಾಟಿ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಮುಂದಾಗಿತ್ತು. ಈ ವೇಳೆ ಭಾರತೀಯ ವಾಯುಸೇನೆಯ ಮಿಗ್-21 ಹಾಗೂ ಸುಖೋಯ್ ಯುದ್ಧ ವಿಮಾನಗಳು ಎಫ್-16ಗೆ ಮುಖಾಮುಖಿಯಾಗಿದ್ದವು. ಭಾರತೀಯ ಯುದ್ಧ ವಿಮಾನಗಳು ಕಂಡ ತಕ್ಷಣ ಎಫ್-16 ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹಿಂದಕ್ಕೆ ಪಲಾಯನ ಮಾಡುವ ವೇಳೆ ಮಿಗ್-21 ಹಾಗೂ ಸುಖೋಯ್ ವಿಮಾನ ಹಿಂದೆ ನುಗ್ಗಿ ಒಂದು ಎಫ್-16 ವಿಮಾನವನ್ನು ಹೊಡೆದುರುಳಿಸಿತ್ತು. ಈ ವೇಳೆ ಮಿಗ್-21 ಹಾರಿಸುತ್ತಿದ್ದ ಅಭಿನಂದನ್ ವರ್ತಮಾನ್ ಅವರು ಎಫ್-16 ಅನ್ನು ಅಡ್ಡಗಟ್ಟಿ ಹೊಡೆದುರುಳಿಸಬೇಕು ಅನ್ನುವ ಯೋಚನೆಯಿಂದ ಅಭಿನಂದನ್ ತಮ್ಮ ವಿಮಾನವನ್ನು ಎಫ್-21 ಬೆನ್ನಟ್ಟಿ ಹೋಗುತ್ತಿದ್ದರು. ಈ ವೇಳೆ ಸುಖೋಯ್ ಯುದ್ಧ ವಿಮಾನ ಒ...